Tuesday 26 March 2019

sacca vibhanga sutta in kannada ಸಚ್ಚ ವಿಭಂಗ ಸುತ್ತ(ಸತ್ಯಗಳ ವಿಶ್ಲೇಷಣೆಯ ಸುತ್ತ)

 
    ಸಚ್ಚ ವಿಭಂಗ ಸುತ್ತ(ಸತ್ಯಗಳ ವಿಶ್ಲೇಷಣೆಯ ಸುತ್ತ)


ನಾನು ಹೀಗೆ ಕೇಳಿದ್ದೇನೆ, ಒಮ್ಮೆ ಭಗವಾನರು ವಾರಣಾಸಿಯ ಇಸಿಪಟ್ಟಣದ ಜಿಂಕೆಗಳ ಉಧ್ಯಾನ(ಮಿಗದಾಯ)ದಲ್ಲಿ ತಂಗಿದ್ದರು, ಆಗ ಭಗವಾನರು ಭಿಕ್ಖುಗಳೊಂದಿಗೆ ಹೀಗೆ ಸಂಬೋಧಿಸಿದರು. :ಭಿಕ್ಖುಗಳೇ
       ಭಗವಾನ್
ಆಗ ಭಗವಾನರು ಹೀಗೆ ನುಡಿದರು : ಭಿಕ್ಖುಗಳೇ ತಥಾಗತರು ಅರಹಂತರು ಹಾಗೂ  ಸಮ್ಮಸಂಬುದ್ಧರಿಂದ ವಾರಣಾಸಿಯ ಋಷಿಪಟ್ಟಣದ ಮಿಗದಾಯದಲ್ಲಿ ಅನುತ್ತರವಾದ ಧಮ್ಮಚಕ್ರವು ಪ್ರವರ್ತನ(ಚಾಲಿತ)ವಾಯಿತು. ಮತ್ತು ಆ ಚಕ್ರವು ಯಾವುದೇ ಸಮಣನಿಂದಾಗಲಿ, ಅಥವಾ ಯಾವುದೇ ಬ್ರಾಹ್ಮಣನಿಂದಾಗಲಿ, ಅಥವಾ ಯಾವುದೇ ದೇವನಿಂದಾಗಲಿ, ಅಥವಾ ಯಾವುದೇ ಮಾರನಿಂದಾಗಲಿ, ಯಾವುದೇ ಬ್ರಹ್ಮನಿಂದಾಗಲಿ, ಅಥವಾ ಲೋಕಗಳಲ್ಲಿ ಯಾರಿಂದಲೇ ಆಗಲಿ ಅಪ್ರವರ್ತನ(ಅಚಾಲಿತ ಅಥವಾ ಹಿಂತಿರುಗಿ ಹೋಗುವಿಕೆ ಅಥವಾ ಸುಳ್ಳೆಂದು ಸಾಬಿತಾಗುವಿಕೆ)ವಾಗುವುದಿಲ್ಲ, ಇದು ಆರ್ಯಸತ್ಯಗಳ ಬೋದನೆಯಾಗಿದೆ, ಪ್ರತಿಪಾದನೆಯಾಗಿದೆ, ಸ್ಥಾಪನೆಯಾಗಿದೆ, ಸ್ಪಷ್ಟತೆಯಾಗಿದೆ, ವಿಶ್ಲೇಷಣೆಯಾಗಿದೆ,
 
    ಯಾವುವವು 4 ಆರ್ಯಸತ್ಯಗಳು ?

ಅವೆಂದರೆ
        1. ದುಃಖ ಆರ್ಯಸತ್ಯ
        2. ದುಃಖದ ಉದಯ(ಕಾರಣ) ಆರ್ಯಸತ್ಯ
        3. ದುಃಖದ ನಿರೋಧ ಆರ್ಯಸತ್ಯ ಮತ್ತು
        4. ದುಃಖದ ನಿರೋಧಕ್ಕೆ ಕೊಂಡೊಯ್ಯುವ ಮಾರ್ಗದ ಆರ್ಯಸತ್ಯ

ಭಿಕ್ಖುಗಳೇ ತಥಾಗತರು ಅರಹಂತರು ಹಾಗೂ  ಸಮ್ಮಸಂಬುದ್ಧರಿಂದ ವಾರಣಾಸಿಯ ಋಷಿಪಟ್ಟಣದ ಮಿಗದಾಯದಲ್ಲಿ ಅನುತ್ತರವಾದ ಧಮ್ಮಚಕ್ರವು ಪ್ರವರ್ತನ(ಚಾಲಿತ)ವಾಯಿತು. ಮತ್ತು ಆ ಚಕ್ರವು ಯಾವುದೇ ಸಮಣನಿಂದಾಗಲಿ, ಅಥವಾ ಯಾವುದೇ ಬ್ರಾಹ್ಮಣನಿಂದಾಗಲಿ, ಅಥವಾ ಯಾವುದೇ ದೇವನಿಂದಾಗಲಿ, ಅಥವಾ ಯಾವುದೇ ಮಾರನಿಂದಾಗಲಿ, ಯಾವುದೇ ಬ್ರಹ್ಮನಿಂದಾಗಲಿ, ಅಥವಾ ಲೋಕಗಳಲ್ಲಿ ಯಾರಿಂದಲೇ ಆಗಲಿ ಅಪ್ರವರ್ತನ(ಅಚಾಲಿತ ಅಥವಾ ಹಿಂತಿರುಗಿ ಹೋಗುವಿಕೆ ಅಥವಾ ಸುಳ್ಳೆಂದು ಸಾಬಿತಾಗುವಿಕೆ)ವಾಗುವುದಿಲ್ಲ, ಇದು ಆರ್ಯಸತ್ಯಗಳ ಬೋದನೆಯಾಗಿದೆ, ಪ್ರತಿಪಾದನೆಯಾಗಿದೆ, ಸ್ಥಾಪನೆಯಾಗಿದೆ, ಸ್ಪಷ್ಟತೆಯಾಗಿದೆ, ವಿಶ್ಲೇಷಣೆಯಾಗಿದೆ,


  ಭಿಕ್ಖುಗಳೇ ನೀವುಗಳು ಸಾರಿಪುತ್ರ ಹಾಗೂ ಮೊಗ್ಗಲಾನರ  ಸೇವನೆ(ಮಿತ್ರತ್ವ)ೆ  ಮಾಡಿರಿ, ಅವರ ಒಡನಾಟದಿಂದ ಬೆರೆಯಿರಿ, ಅವರು ಪಂಡಿತ(ಜ್ಞಾನಿ) ಭಿಕ್ಖುಗಳಾಗಿದ್ದಾರೆ, ಅವರು ಬ್ರಹ್ಮಚರಿಯದ ಶ್ರೇಷ್ಟ ಜೀವನಕ್ಕೆ ಅನುಗ್ರಹ ತೋರುತ್ತಾರೆ, ಅದರಲ್ಲಿ ಸಾರಿಪುತ್ತರು  ಜನ್ಮನೀಡಿದ ಮಾತೆಯ ತರಹ, ಹಾಗೆಯೇ ಮೋಗ್ಗಲಾನರು ಮಗುವನ್ನು ಸಲಹುವಂತಹವರ ತರಹ, ಸಾರಿಪುತ್ತರು ಎಲ್ಲರನ್ನು ಸೋತಪತ್ತಿ ಫಲವನ್ನು ಪಡೆಯುವ ಹಾಗೇ ಮಾರ್ಗದಶರ್ಿತರಾಗುವರು. ಮತ್ತು ಮೊಗ್ಗಲಾನರು ಉನ್ನತ ಗುರಿಯೆಡೆಗೆ ಸಾಗಿಸುವಂತಹವರು. ಸಾರಿಪುತ್ರರು ಆರ್ಯಸತ್ಯಗಳನ್ನು ಬೋದಿಸುವಲ್ಲಿ ಸಮರ್ಥರು ಅವರು ಆರ್ಯಸತ್ಯಗಳನ್ನು ವಿವರಿಸುತ್ತಾರೆ, ಒತ್ತಿಹೇಳುತ್ತಾರೆ, ಸ್ಥಾಪಿಸುತ್ತಾರೆ, ಸ್ಪಷ್ಟಿಕರಿಸುತ್ತಾರೆ, ವಿಶ್ಲೇಷಿಸುತ್ತಾರೆ, ಮತ್ತು ಪ್ರಕಟಪಡಿಸುತ್ತಾರೆ. ಹೀಗೆ ನುಡಿದ ಭಗವಾನರು ತಮ್ಮ ಆಸನದಿಂದ ಎದ್ದು ತಮ್ಮ ವಿಹಾರದೆಡೆಗೆ ವಿಶ್ರಮಿಸಲು ಹೋರಟರು.

     ಅವರು ಹೋರಟ ನಂತರ ಸಾರಿಪುತ್ತರು ಎದ್ದು ಭಿಕ್ಖುಗಳೊಂದಿಗೆ ಹೀಗೆ ಸಂಬೋದಿಸಿದರು : ಅಯುಷ್ಮಂತ ಭಿಕ್ಖುಗಳೇ,
ಆಗ ಪ್ರತಿಯಾಗಿ ಭಿಕ್ಖುಗಳು ಸಹಾ ಆಯುಷ್ಮಂತರೇ ಎಂದರು. ಆಗ ಸಾರಿಪುತ್ತರು ಹೀಗೆ ನುಡಿದರು : ಭಿಕ್ಖುಗಳೇ ತಥಾಗತರು ಅರಹಂತರು ಹಾಗೂ  ಸಮ್ಮಸಂಬುದ್ಧರುರಿಂದ ವಾರಣಾಸಿಯ ಋಷಿಪಟ್ಟಣದ ಮಿಗದಾಯದಲ್ಲಿ ಅನುತ್ತರವಾದ ಧಮ್ಮಚಕ್ರವು ಪ್ರವರ್ತನ(ಚಾಲಿತ)ವಾಯಿತು. ಮತ್ತು ಆ ಚಕ್ರವು ಯಾವುದೇ ಸಮಣನಿಂದಾಗಲಿ, ಅಥವಾ ಯಾವುದೇ ಬ್ರಾಹ್ಮಣನಿಂದಾಗಲಿ, ಅಥವಾ ಯಾವುದೇ ದೇವನಿಂದಾಗಲಿ, ಅಥವಾ ಯಾವುದೇ ಮಾರನಿಂದಾಗಲಿ, ಯಾವುದೇ ಬ್ರಹ್ಮನಿಂದಾಗಲಿ, ಅಥವಾ ಲೋಕಗಳಲ್ಲಿ ಯಾರಿಂದಲೇ ಆಗಲಿ ಅಪ್ರವರ್ತನ(ಅಚಾಲಿತ ಅಥವಾ ಹಿಂತಿರುಗಿ ಹೋಗುವಿಕೆ ಅಥವಾ ಸುಳ್ಳೆಂದು ಸಾಬಿತಾಗುವಿಕೆ)ವಾಗುವುದಿಲ್ಲ, ಇದು ಆರ್ಯಸತ್ಯಗಳ ಬೋದನೆಯಾಗಿದೆ, ಪ್ರತಿಪಾದನೆಯಾಗಿದೆ, ಸ್ಥಾಪನೆಯಾಗಿದೆ, ಸ್ಪಷ್ಟತೆಯಾಗಿದೆ, ವಿಶ್ಲೇಷಣೆಯಾಗಿದೆ,
 
    ಯಾವುವವು 4 ಆರ್ಯಸತ್ಯಗಳು ?




       ಅವೆಂದರೆ
        1. ದುಃಖ ಆರ್ಯಸತ್ಯ
        2. ದುಃಖದ ಉದಯ(ಕಾರಣ) ಆರ್ಯಸತ್ಯ
        3. ದುಃಖದ ನಿರೋಧ ಆರ್ಯಸತ್ಯ ಮತ್ತು
        4. ದುಃಖದ ನಿರೋಧಕ್ಕೆ ಕೊಂಡೊಯ್ಯುವ ಮಾರ್ಗದ ಆರ್ಯಸತ್ಯ

      ಮತ್ತೆ ಯಾವುದು ದುಃಖ ಆರ್ಯ ಸತ್ಯ ?
   ಜನ್ಮವು ದುಃಖ, ಜರಾವು ದುಃಖ, ಮರಣವು ದುಃಖ, ಶೋಕ ಪ್ರಲಾಪವು ದುಃಖ, ನೋವು ದುಃಖ, ಚಿಂತೆ ಯಾತನೆಗಳು ದುಃಖ, ಅಪ್ರಿಯವಾದುದರ ಸಮಾಗಮ ದುಃಖ, ಪ್ರಿಯವಾದುದರ ವಿಯೋಗ ದುಃಖ, ಇಷ್ಟ(ಇಚ್ಚೆ)ಪಟ್ಟಿದ್ದು ದೊರೆಯದಿದ್ದಾಗ ದುಃಖ, ಒಟ್ಟಾರೆ ಸಂಕ್ಷಿಪ್ತವಾಗಿ ಹೇಳುವುದಾದರೆ ಪಂಚ ಉಪಾದಾನ ಖಂದಗಳು( 5 ರಾಶಿಗಳಿಗೆ(ದೇಹ ಮತ್ತು ಮನಸ್ಸಿಗೆ) ಅಂಟುವಿಕೆಯೇ) ದುಃಖಕರ.

  ಮತ್ತು ಜನ್ಮ ಎಂದರೇನು?
     ಆಯುಷ್ಮಂತರೇ, ಎಲ್ಲಾ ಜೀವಿಗಳ ವರ್ಗಗಳಲ್ಲಿ ಜೀವಿಗಳ ಜನ್ಮ, ಆರಂಭ, ಪುನರ್ಜನ್ಮ, ಖಂದಗಳ ಸ್ಥಾಪನೆ, ಮತ್ತು ಇಂದ್ರೀಯಗಳ ಪಡೆಯುವಿಕೆಯನ್ನು ಜನ್ಮ ಎನ್ನುತ್ತಾರೆ.

   ಮತ್ತು ಜರಾ ಎಂದರೇನು ?
     ಆಯುಷ್ಮಂತರೇ, ಎಲ್ಲಾ ಜೀವಿಗಳ ವರ್ಗಗಳಲ್ಲಿ ಜೀವಿಗಳ ವೃದ್ಧಾಪ್ಯ, ವಯಸ್ಸಿನಿಂದ ದುರ್ಬಲವಾಗುವಿಕೆ, ಮುರಿದ ಹಲ್ಲುಗಳು, ನೆರತಕೂದಲು, ಸುಕ್ಕುಗಟ್ಟಿದ ಚರ್ಮ, ಶಕ್ತಿಗುಂದುವಿಕೆ, ಇಂದ್ರೀಯಗಳ ಶಿಥಿಲತೆಯನ್ನು ಜರಾ ಎನ್ನುತ್ತಾರೆ.

   ಮತ್ತು ಮರಣ ಎಂದರೇನು ?
     ಆಯುಷ್ಮಂತರೇ, ಎಲ್ಲಾ ಜೀವಿಗಳ ವರ್ಗಗಳಲ್ಲಿ ಮರಣಿಸುವಿಕೆ, ನಾಷವಾಗುವಿಕೆ, ವಿಯೋಗ, ಅಂತ್ಯವಾಗುವಿಕೆ, ಮೃತ್ಯುವಶವಾಗುವಿಕೆ, ಸಾವು,  ಖಂದಗಳ ಬೇರ್ಪಡೆಯಾಗುವಿಕೆ, ಶವವಾಗುವಿಕೆ, ಜೀವಿಂದ್ರೀಯದ ಕತ್ತರಿಸುವಿಕೆಯನ್ನು ಮರಣ ಎನ್ನುವರು.

     ಮತ್ತು ಶೋಕ ಎಂದರೇನು?
   ಆಯುಷ್ಮಂತರೇ, ಶೋಕ, ಶೋಕಿಸುವಿಕೆ, ಶೋಕಸ್ಥಿತಿ, ಅಂತರ್ಯದ ದುಃಖ, ದೌಭರ್ಾಗ್ಯ ಅಥವಾ ದುರ್ಘಟನೆಗೆ ಈಡಾಗಿರುವವರಲ್ಲಿನ ಆಂತರ್ಯದ ಆಳ ನೋವು, ಶೋಕವನ್ನು ಅನುಭವಿಸುತ್ತಿರುವಿಕೆ, ಇವನೆಲ್ಲಾ ಶೋಕ ಎನ್ನುವರು.

     ಮತ್ತು ಪ್ರಲಾಪ ಎಂದರೇನು ?
 ಆಯುಷ್ಮಂತರೇ ಅಳುವಿಕೆ, ಪ್ರಲಾಪಿಸುವಿಕೆ, ಯಾರದರೂ ದುಃಖಭರಿತ ಸನ್ನಿವೇಶದಲ್ಲಿದ್ದಾಗ ಅಥವಾ ತಾವೇ ಅಂತಹ ಸನ್ನಿವೇಶದಲ್ಲಿದ್ದಾಗ ಅತ್ತು ಪ್ರಲಾಪಿಸುವುದನ್ನು ಪ್ರಲಾಪವೆನ್ನುತ್ತೇವೆ.

       ಮತ್ತು ನೋವು(ಕಾಯದ ದುಃಖ) ಎಂದರೇನು ?
 ಅಯುಷ್ಮಂತರೇ ಶಾರೀರಿಕ ನೋವು, ಶಾರೀರಿಕ ಅಸಂತೋಷ, ಶರೀರಕ್ಕೆ ಸಂಪರ್ಕವಾಗಿ ಉಂಟಾಗುವ ನೋವುಭರಿತ, ಅಪ್ರೀಯ ವೇದನೆಗಳನ್ನು ನೋವು(ಕಾಯದ ದುಃಖ) ಎನ್ನುತ್ತಾರೆ.

        ಮತ್ತು ದೋಮನಸ್ಸು ಎಂದರೇನು ?
     ಆಯುಷ್ಮಂತರೇ, ಮಾನಸಿಕ ದುಃಖ, ಮಾನಸಿಕ ಅಸಂತುಷ್ಟತೆ, ಮನಸ್ಸಿಗೆ ಮಾನಸಿಕ ವಿಷಯಗಳಾದ ಚೇತಸಿಕಗಳು ಸಂಪರ್ಕವಾದಾಗ ಉಂಟಾಗುವ ಅಪ್ರಿಯ ವೇದನೆಗಳನ್ನು ದೋಮನಸ್ಸು ಎನ್ನುತ್ತೇವೆ.

         ಮತ್ತು ಉಪಯಾಸೋ(ಖಿನ್ನತೆ/ಚಿಂತೆ) ಎಂದರೇನು ?
   ಆಯುಷ್ಮಂತರೇ, ಒತ್ತಡ, ಯಾತನೆ, ಯಾವಾಗ ಒಬ್ಬನು ದುಃಖಭರಿತ ಅಥವಾ ನಷ್ಟಭರಿತ ಸನ್ನಿವéೇಷದಲ್ಲಿದ್ದಾಗ ಆತನು ಅನುಭವಿಸುವ ದುಃಖವನ್ನು ಉಪಯಾಸೋ ಎನ್ನುತ್ತೇವೆ.

          ಮತ್ತು ಇಷ್ಟ(ಇಚ್ಚೆ)ಪಟ್ಟಿದ್ದು ದೊರೆಯದಿರುವುದೇ ದುಃಖ ಎಂದರೇನು ?
    ಇಲ್ಲಿ ಅಯುಷ್ಮಂತರೇ, ಇದಕ್ಕೆ ಉದಾಹರಿಸುವುದಾದರೆ ಯಾವ ಜೀವಿಗಳು ಪುನರ್ಜನ್ಮಿಸುವ ಖಚಿತತೆ ಹೊಂದಿವೆಯೊ ಅವರಲ್ಲಿ ಇಂತಹ ಇಚ್ಚೆ ಉಂಟಾಗಬಹುದು ಎನೆಂದರೇ ಒಹ್ ನಾವು ಮಾತ್ರ ಪುನರ್ಜನ್ಮ ತಾಳದಿದ್ದರೆ ಹೇಗೆ !, ನಮಗೆ ಮಾತ್ರ ಪುನರ್ಜನ್ಮವಾಗದಿರಲಿ! ಅದರೆ ಹಾಗೇ ಬಯಸಿದ ಮಾತ್ರಕ್ಕೆ ಒಬ್ಬರಿಗೆ ಪುನರ್ಜನ್ಮ ಸಿಗದೇ ಹೋಗುವುದಿಲ್ಲ. ಬಯಸಿದ ಮಾತ್ರಕ್ಕೆ ಹಾಗಾವುದಿಲ್ಲ. ಆಗ ಆತನು ಹಾಗೇ ಆಗಲಿಲ್ಲವಲ್ಲ ಎಂದು ದುಃಖಿಸುವನು, ಇದನ್ನೇ ಇಚ್ಚಿಸಿದ ಮಾತ್ರಕ್ಕೆ ಹಾಗೇ ಆಗದಿದ್ದಾಗ ಸಿಗುವ ದುಃಖ ಎನ್ನುವರು. ಜೀವಿಗಳಲ್ಲಿ ಯಾರೆಲ್ಲಾ ವೃದ್ಧಾವಸ್ಥೆಗೆ.....ರೋಗಕ್ಕೆ........ಮರಣಕ್ಕೆ.........ಶೋಕಕ್ಕೆ......ಪ್ರಲಾಪಕ್ಕೆ......ನೋವಿಗೆ.......ದೋಮನಸ್ಸಿಗೆ......ಮತ್ತು, ಚಿಂತೆಗೆ ಗುರಿಯಾಗಬಾರದು ಎಂದು ಇಚ್ಚಿಸುತ್ತೇವೆ, ಅದರೆ ಕೇವಲ ಇಚ್ಚಿಸಿದ ಮಾತ್ರಕ್ಕೆ ನೀವು ಅವೆಲ್ಲಾವನ್ನು ತಡೆಯಲು ಸಾಧ್ಯವೇ ?.ಇದನ್ನೇ ಇಚ್ಚಿಸಿದ ಮಾತ್ರಕ್ಕೆ ಹಾಗೇ ಆಗದಿದ್ದಾಗ ಸಿಗುವ ದುಃಖ ಎನ್ನುವರು.
   
        ಮತ್ತು ಆಯುಷ್ಮಂತರೇ ಪಂಚ ಉಪಾದಾನಖಂದಗಳು ದುಃಖ ಎಂದರೇನು?
  ಇಲ್ಲಿ  5 ರೀತಿಯ ಅಂಟುವಿಕೆಗಳಿವೆ ಅವೆಂದರೆ ದೇಹಕ್ಕೆ, ವೇದನೆಗಳಿಗೆ, ಗ್ರಹಿಕೆಗಳಿಗೆ, ಸಂಖಾರಗಳಿಗೆ, ಮತ್ತು ವಿಞ್ಞಆನಗಳಿಗೆ ಅಂಟಿಕೊಂಡಿರುವುದು. ಇದನ್ನು ಸಂಕ್ಷಿಪ್ತವಾಗಿ 5 ಖಂದಗಳಿಗೆ ಅಂಟಿರುವುದೇ ದುಃಖ ಎಂದು ಹೇಳಲಾಗಿದೆ, ಇದೇ ಆರ್ಯರ ದುಃಖ ಸತ್ಯವಾಗಿದೆ. 

      ಮತ್ತು ಆಯುಷ್ಮಂತರೇ ಆರ್ಯರ ದುಃಖದ ಸಮುದಯ(ಕಾರಣ/ಉದಯ) ಸತ್ಯ ಎಂದರೇನು ?
   ಇಲ್ಲಿ ತೃಷ್ಣೆಯೇ ಪುನರ್ಜನ್ಮಗಳ ಕಡೆಗೆ ಕರೆದೊಯ್ಯುತ್ತದೆ, ಇದು ಆನಂದ ಹಾಗೂ ರಾಗದಿಂದ ಕೂಡಿದ್ದು, ಸದಾ ವಿವಿಧ ವಲಯಗಳಲ್ಲಿ, ಕ್ಷೇತ್ರಗಳಲ್ಲಿ ಸುಖಭೋಗಗಳನ್ನು ಹುಡುಕುತ್ತಿರುತ್ತದೆ. ಅವೆಂದರೆ ಕಾಮತನ್ಹಾ(ಇಂದ್ರೀಯಸುಖಗಳ ಬೋಗಾಸಕ್ತಿ), ಭವತನ್ಹಾ(ಶಾಶ್ವತವಾಗಿ ಇರಬೇಕು ಎನ್ನುವ ತೀವ್ರಬಯಕೆ), ಮತ್ತು ವಿಭವ ತನ್ಹಾ(ಇರಲೇಬಾರದು ಎಂಬ ತೀವ್ರ ಬಯಕೆ). ಇದನ್ನೇ ಆರ್ಯರ ದುಃಖದ ಸಮುದಯ(ಕಾರಣ/ಉದಯ) ಸತ್ಯ ಎನ್ನುತ್ತಾರೆ.


      ಮತ್ತು ಆಯುಷ್ಮಂತರೇ ಆರ್ಯರ ದುಃಖ ನಿರೋಧ(ಅಂತ್ಯ/ಸಮಾಪ್ತಿ/ಇಲ್ಲವಾಗುವಿಕೆ) ಎಂದರೇನು ?
  ದುಃಖಕ್ಕೆ ಕಾರಣವಾದ ತನ್ಹಾವನ್ನು (ತೀವ್ರಬಯಕೆಗಳನ್ನು) ನಿಶ್ಶೇಷವಾಗಿ ವಿರಾಗತೋರುವುದು(ಮರೆಮಾಡುವುದು/ವಿಕರ್ಷಣವಾಗುವುದು), ನಿರೋಧಗೊಳಿಸುವುದು(ಅಂತ್ಯ), ತ್ಯಾಗಮಾಡುವುದು, ಪಟಿನಿಸ್ಸ(ಬಿಟ್ಟುಬಿಡುವುದು)ಮಾಡುವುದು, ಮುಕ್ತವಾಗುವುದು, ಅನಾಲಯಗೊಳ್ಳುವುದು(ಅಂಟದೆ ಇರುವುದು), ಇದನ್ನೇ ಆಯುಷ್ಮಂತರೇ ಆರ್ಯರ ದುಃಖನಿರೋಧ ಎನ್ನುತ್ತಾರೆ.

   
     ಮತ್ತು ಆಯುಷ್ಮಂತರೇ ಆರ್ಯರ ದುಃಖ ನಿರೋಧಕ್ಕೆ ಕೊಂಡೊಯ್ಯುವ ಮಾರ್ಗಸತ್ಯ ಎಂದರೇನು ?
ಅದೇ ಆರ್ಯ ಆಷ್ಟಾಂಗ ಮಾರ್ಗ ಅಂದರೆ

ಸಮ್ಮಾ ದಿಟ್ಟಿ
ಸಮ್ಮಾ ಸಂಕಲ್ಪ
ಸಮ್ಮಾ ವಾಚಾ
ಸಮ್ಮಾ ಕಮ್ಮ
ಸಮ್ಮಾ ಜೀವನೋಪಾಯ
ಸಮ್ಮಾ ವ್ಯಾಯಾಮ
ಸಮ್ಮಾ ಸ್ಮೃತಿ
ಸಮ್ಮಾ ಸಮಾಧಿ

ಮತ್ತು ಆಯುಷ್ಮಂತರೇ ಸಮ್ಮಾ ದಿಟ್ಟಿ(ದೃಷ್ಟಿಕೋನ) ಎಂದರೇನು?
  ದುಃಖ ಆರ್ಯ ಸತ್ಯ, ದುಃಖ ಸಮುದಯ ಆರ್ಯ ಸತ್ಯ, ದುಃಖ ನಿರೋಧ ಆರ್ಯ ಸತ್ಯ, ಮತ್ತು ದುಃಖ ನಿರೋಧಕ್ಕೆ ಕೊಂಡೊಯ್ಯುನ ಮಾರ್ಗ. ಇವುಗಳನ್ನು ಯಾತಾರ್ಥವಾಗಿ ಅರಿಯುವುದೇ ಸಮ್ಮಾ ದಿಟ್ಟಿಯಾಗಿದೆ.


ಮತ್ತು ಆಯುಷ್ಮಂತರೇ ಸಮ್ಮಾಸಂಕಲ್ಪ ಎಂದರೇನು?
  ತ್ಯಾಗದ ಸಂಕಲ್ಪಗಳು, ಅದ್ವೇಷದ ಸಂಕಲ್ಪಗಳು, ಅಹಿಂಸೆಯ ಸಂಕಲ್ಪಗಳು ಇಂಥವುಗಳನ್ನು ಆಯುಷ್ಮಂತರೇ ಸಮ್ಮಾ ಸಂಕಲ್ಪ ಎನ್ನುವರು.

ಮತ್ತು ಆಯುಷ್ಮಂತರೇ ಸಮ್ಮಾವಾಚಾ ಎಂದರೇನು?
  ಸುಳ್ಳುಮಾತುಗಳಿಂದ ವಿರತನಾಗುವಿಕೆ , ಚಾಡಿತನಗಳಿಂದ ವಿರತನಾಗುವಿಕೆ, ಕಠೋರ ಮಾತುಗಳಿಂದ ವಿರತನಾಗುವಿಕೆ , ಮತ್ತು ಅಸಂಬದ್ಧಮಾತುಗಳಿಂದ ವಿರತನಾಗುವಿಕೆ ಇಂಥವುಗಳನ್ನು ಆಯುಷ್ಮಂತರೇ ಸಮ್ಮಾವಾಚಾ ಎನ್ನುವರು.


      ಮತ್ತು ಆಯುಷ್ಮಂತರೇ ಸಮ್ಮಾಕಮ್ಮ ಎಂದರೇನು?
  ಪ್ರಾಣಿಹತ್ಯೆಗಳಿಂದ ವಿರತನಾಗುವಿಕೆ, ಕಳ್ಳತನಗಳಿಂದ ವಿರತನಾಗುವಿಕೆ, ಮತ್ತು ಅನೈತಿಕ ಕಾಮುಕತೆಯಿಂದ ವಿರತನಾಗುವಿಕೆ ಇಂಥವುಗಳನ್ನು ಆಯುಷ್ಮಂತರೇ ಸಮ್ಮಾಕಮ್ಮ ಎನ್ನುವರು.

       ಮತ್ತು ಆಯುಷ್ಮಂತರೇ ಸಮ್ಮಾಜೀವನೊಪಾಯ ಎಂದರೇನು?
   ಇಲ್ಲಿ ಆರ್ಯಶ್ರಾವಕನು ಮಿಥ್ಯಜೀವನೋಪಯಗಳನ್ನು ತೊರೆದು ಸಮ್ಮಜೀವನೊಪಾಯದಿಂದ ಜೀವಿಸಿದರೆ ಇಂಥವುಗಳನ್ನು ಆಯುಷ್ಮಂತರೇ ಸಮ್ಮಾಕಮ್ಮ ಎನ್ನುವರು.

       ಮತ್ತು ಆಯುಷ್ಮಂತರೇ ಸಮ್ಮಾವ್ಯಾಯಮವು ಯಾವುದು ?
   ಇಲ್ಲಿ ಆರ್ಯಶ್ರಾವಕನು ಇನ್ನು ಉತ್ಪನ್ನವಾಗದಿರುವ ಪಾಪಯುತವಾದ ಮತ್ತು ಅಕುಶಲವಾದ ಮಾನಸಿಕ ಸ್ಥಿತಿ(ಯೋಚನೆ)ಗಳನ್ನು ಉದಯಿಸದಂತೆ ಮಾಡಲು ಇಚ್ಚೆಯುಳ್ಳವನಾಗುತ್ತಾನೆ, ಉತ್ಸಾಹಿತನಾಗುತ್ತಾನೆ, ಪ್ರಯತ್ನಿಸುತ್ತಾನೆ, ಮತ್ತು ಅದರಲ್ಲಿ ಯಶಸ್ವಿಯಾಗುತ್ತಾನೆ.  ಹಾಗೇಯೇ ಇಲ್ಲಿ ಆರ್ಯಶ್ರಾವಕನು ಉತ್ಪನ್ನವಾಗಿರುವ ಪಾಪಯುತವಾದ ಮತ್ತು ಅಕುಶಲವಾದ ಮಾನಸಿಕ ಸ್ಥಿತಿ(ಯೋಚನೆ)ಗಳನ್ನು ಇನ್ನಿಲ್ಲದಂತೆ ಮಾಡಲು ಇಚ್ಚೆಯುಳ್ಳವನಾಗುತ್ತಾನೆ, ಉತ್ಸಾಹಿತನಾಗುತ್ತಾನೆ, ಪ್ರಯತ್ನಿಸುತ್ತಾನೆ, ಮತ್ತು ಅದರಲ್ಲಿ ಯಶಸ್ವಿಯಾಗುತ್ತಾನೆ. ಹಾಗೇಯೆ ಇಲ್ಲಿ ಆರ್ಯಶ್ರಾವಕನು ಇನ್ನು ಉತ್ಪನ್ನವಾಗದಿರುವ ಪುಣ್ಯಭರಿತವಾದ ಮತ್ತು ಕುಶಲವಾದ ಮಾನಸಿಕ ಸ್ಥಿತಿ(ಯೋಚನೆ)ಗಳನ್ನು ಉದಯಿಸುವಂತೆ ಮಾಡಲು ಇಚ್ಚೆಯುಳ್ಳವನಾಗುತ್ತಾನೆ, ಉತ್ಸಾಹಿತನಾಗುತ್ತಾನೆ, ಪ್ರಯತ್ನಿಸುತ್ತಾನೆ, ಮತ್ತು ಅದರಲ್ಲಿ ಯಶಸ್ವಿಯಾಗುತ್ತಾನೆ. ಹಾಗೆಯೇ ಇಲ್ಲಿ ಆರ್ಯಶ್ರಾವಕನು ಉತ್ಪನ್ನವಾಗಿರುವ ಪುಣ್ಯಭರಿತವಾದ ಮತ್ತು ಕುಶಲವಾದ ಮಾನಸಿಕ ಸ್ಥಿತಿ(ಯೋಚನೆ)ಗಳನ್ನು ಕಳೆದುಹೋಗದಂತೆ, ವೃದ್ಧಿಸುವಂತೆ, ವಿಕಸಿಸುವಂತೆ, ಮಾಡಲು ಇಚ್ಚೆಯುಳ್ಳವನಾಗುತ್ತಾನೆ, ಉತ್ಸಾಹಿತನಾಗುತ್ತಾನೆ, ಪ್ರಯತ್ನಿಸುತ್ತಾನೆ, ಮತ್ತು ಅದರಲ್ಲಿ ಯಶಸ್ವಿಯಾಗುತ್ತಾನೆ. ಇಂಥವುಗಳನ್ನು ಆಯುಷ್ಮಂತರೇ ಸಮ್ಮಾವ್ಯಾಯಾಮ ಎನ್ನುವರು. 

        ಮತ್ತು ಆಯುಷ್ಮಂತರೇ ಸಮ್ಮಾ ಸ್ಮೃತಿಯು ಯಾವುದು ? 
  ಇಲ್ಲಿ ಆಯುಷ್ಮಂತರೇ, ಭಿಕ್ಖುವು ಕಾಯದಲ್ಲಿ ಕಾಯಾನುಪಸ್ಸಿಯಾಗಿ ವಿಹರಿಸುತ್ತಾನೆ, ಉತ್ಸಾಹಿತನಾಗಿ ಎಚ್ಚರಿಕೆಯಿಂದ ಪೂರ್ಣಅರಿವಿನಿಂದ ಲೋಕದ ಯಾವುದಕ್ಕೂ ಆಸೆಯಾಗಲಿ, ದ್ವೇಷವಾಗಲಿ ತಾಳದೆ ವಿಕ್ಷಿಸುವವನಾಗುತ್ತಾನೆ. ಅದೇ ರೀತಿಯಲ್ಲಿ ವೇದನೆಗಳಲ್ಲಿ ವೇದನೂಪಸ್ಸಿಯಾಗಿ ವಿಹರಿಸುತ್ತಾನೆ. ಉತ್ಸಾಹಿತನಾಗಿ ಎಚ್ಚರಿಕೆಯಿಂದ ಪೂರ್ಣಅರಿವಿನಿಂದ ಲೋಕದ ಯಾವುದಕ್ಕೂ ಆಸೆಯಾಗಲಿ, ದ್ವೇಷವಾಗಲಿ ತಾಳದೆ ವಿಕ್ಷಿಸುವವನಾಗುತ್ತಾನೆ. ಹಾಗೆಯೇ ಚಿತ್ತಗಳಲ್ಲಿ ಚಿತ್ತಾನುಪಸ್ಸಿಯಾಗಿ ವಿಹರಿಸುತ್ತಾನೆ, ಉತ್ಸಾಹಿತನಾಗಿ ಎಚ್ಚರಿಕೆಯಿಂದ ಪೂರ್ಣಅರಿವಿನಿಂದ ಲೋಕದ ಯಾವುದಕ್ಕೂ ಆಸೆಯಾಗಲಿ, ದ್ವೇಷವಾಗಲಿ ತಾಳದೆ ವಿಕ್ಷಿಸುವವನಾಗುತ್ತಾನೆ. ಅದೇ ರೀತಿಯಲ್ಲಿ ಧಮ್ಮಗಳಲ್ಲಿ ಧಮ್ಮಾನುಪಸ್ಸಿಯಾಗಿ ವಿಹರಿಸುತ್ತಾನೆ, ಉತ್ಸಾಹಿತನಾಗಿ ಎಚ್ಚರಿಕೆಯಿಂದ ಪೂರ್ಣಅರಿವಿನಿಂದ ಲೋಕದ ಯಾವುದಕ್ಕೂ ಆಸೆಯಾಗಲಿ, ದ್ವೇಷವಾಗಲಿ ತಾಳದೆ ವಿಕ್ಷಿಸುವವನಾಗುತ್ತಾನೆ. ಇಂಥವುಗಳನ್ನು ಆಯುಷ್ಮಂತರೇ ಸಮ್ಮಾಸತಿ ಎನ್ನುವರು. 


          ಮತ್ತು ಆಯುಷ್ಮಂತರೇ ಸಮ್ಮಾ ಸ್ಮೃಮಾಧಿಯು ಯಾವುದು ?  

    ಇಲ್ಲಿ ಆಯುಷ್ಮಂತರೇ ಭಿಕ್ಖುವು ಇಂದ್ರೀಯಸುಖಗಳ ಯೋಚನೆಗಳಿಂದ ರಹಿತನಾಗಿ(ಬರಿದಾಗಿ) ಹಾಗೆಯೇ ಅಕುಶಲ ಮಾನಸಿಕ ಸ್ಥಿತಿಗಳಿಂದ ರಹಿತನಾಗಿ, ವಿತರ್ಕ(ಮನಸ್ಸನ್ನು ಕೇಂದ್ರಿಕರಿಸುವಿಕೆ), ವಿಚಾರ(ಆ ದಿಕ್ಕಿನಲ್ಲಿಯೇ ಮನಸ್ಸನ್ನು ಹರಿಸುವಿಕೆ),  ಹಾಗೂ ಏಕಾಗ್ರತೆಗಳಿಂದ ಹುಟ್ಟಿದ  ಆನಂದ ಮತ್ತು ಸುಖದಿಂದ ಕೂಡಿದ ಪ್ರಥಮ ಸಮಾದಿಯಲ್ಲಿ ನೆಲೆಸುತ್ತಾನೆ.

 ನಂತರ ವಿತರ್ಕ ಮತ್ತು ವಿಚಾರಗಳಿಂದ ರಹಿತನಾಗಿ, ಅವುಗಳಿಗೆ ಅತೀತನಾಗಿ  ದ್ವೀತೀಯ ಸಮಾಧಿಯಲ್ಲಿ ನೆಲೆಸುತ್ತಾನೆ, ಆ ಸಮಾಧಿಯು ವಿತರ್ಕ ಮತ್ತು ವಿಚಾರಗಳಿಂದ ರಹಿತವಾದ ಆನಂದ ಹಾಗೂ ಸುಖಗಳಿಂದ ಕೂಡಿರುತ್ತದೆ. ಜೋತೆಗೆ ಅಂತರಿಕ ಸ್ಪಷ್ಟತೆ ಹಾಗೂ ಶ್ರದ್ಧೆಯಿಂದ ಕೂಡಿದ್ದು ಚಿತ್ತದ ಏಕೋಭಾವದಿಂದ ಕೂಡಿರುತ್ತದೆ.

    ನಂತರ ಆನಂದವನ್ನು ಮೀರಿದ ತ್ರಿತೀಯ ಸಮಾಧಿಯಲ್ಲಿ ನೆಲೆಸುತ್ತಾನೆ. ಅಲ್ಲಿ ಅವರು ಸಮಚಿತ್ತತೆಯಿಂದ, ಸ್ಮೃತಿ ಹಾಗೂ ಎಚ್ಚರಿಕೆಯಿಂದ ಕೂಡಿದ ಸುಖದಲ್ಲಿ ನೆಲಸಿರುತ್ತಾರೆ, ಯಾವುದನ್ನು ಕುರಿತು ಆರ್ಯರು ಹೀಗೆ ನುಡಿದಿದ್ದಾರೊ : ಉಪೇಕ್ಖ(ಸಮಚಿತ್ತತೆ) ಹಾಗೂ ಸ್ಮೃತಿ(ಎಚ್ಚರಿಕೆ)ಯಿಂದ ಕೂಡಿದ ಸುಖಯುತ ಸಮಾಧಿಯಲ್ಲಿ ನೆಲಸುತ್ತಾನೆ. ಅದರಲ್ಲಿ ನೆಲಸುತ್ತಾನೆ.

    ನಂತರ ಸುಖಗಳನ್ನು ಹಾಗೂ ನೋವುಗಳನ್ನು ತ್ಯೇಜಿಸಿ, ಹಿಂದಿನ ಸುಖ ಹಾಗೂ ಶೋಕಗಳನ್ನು ಮೀರಿ, ಆತನು ಚತುರ್ಥ ಸಮಾಧಿಯಲ್ಲಿ ಪ್ರವೇಶಿಸಿ ನೆಲಸುತ್ತಾನೆ, ಅಲ್ಲಿ ಶುದ್ಧವಾದ ಸಮಚಿತ್ತತೆ ಹಾಗೂ ಸ್ಮೃತಿಯು ಇರುತ್ತದೆ. ಇದನ್ನೇ ಆಯುಷ್ಮಂತರೇ ಸಮ್ಮ ಸಮಾಧಿ ಎನ್ನುವರು. ಇದನ್ನೇ ಆಯುಷ್ಮಂತರೇ ದುಃಖನಿರೋಧಗಾಮಿನಿಯ ಮಾರ್ಗದ ಆರಿಯ ಸತ್ಯ ಎನ್ನುವರು.

    ಅಯುಷ್ಮಂತರೇ ತಥಾಗತರು ಅರಹಂತರು ಹಾಗೂ  ಸಮ್ಮಸಂಬುದ್ಧರಿಂದ ವಾರಣಾಸಿಯ ಋಷಿಪಟ್ಟಣದ ಮಿಗದಾಯದಲ್ಲಿ ಅನುತ್ತರವಾದ ಧಮ್ಮಚಕ್ರವು ಪ್ರವರ್ತನ(ಚಾಲಿತ)ವಾಯಿತು. ಮತ್ತು ಆ ಚಕ್ರವು ಯಾವುದೇ ಸಮಣನಿಂದಾಗಲಿ, ಅಥವಾ ಯಾವುದೇ ಬ್ರಾಹ್ಮಣನಿಂದಾಗಲಿ, ಅಥವಾ ಯಾವುದೇ ದೇವನಿಂದಾಗಲಿ, ಅಥವಾ ಯಾವುದೇ ಮಾರನಿಂದಾಗಲಿ, ಯಾವುದೇ ಬ್ರಹ್ಮನಿಂದಾಗಲಿ, ಅಥವಾ ಲೋಕಗಳಲ್ಲಿ ಯಾರಿಂದಲೇ ಆಗಲಿ ಅಪ್ರವರ್ತನ(ಅಚಾಲಿತ ಅಥವಾ ಹಿಂತಿರುಗಿ ಹೋಗುವಿಕೆ ಅಥವಾ ಸುಳ್ಳೆಂದು ಸಾಬಿತಾಗುವಿಕೆ)ವಾಗುವುದಿಲ್ಲ, ಇದು ಆರ್ಯಸತ್ಯಗಳ ಬೋದನೆಯಾಗಿದೆ, ಪ್ರತಿಪಾದನೆಯಾಗಿದೆ, ಸ್ಥಾಪನೆಯಾಗಿದೆ, ಸ್ಪಷ್ಟತೆಯಾಗಿದೆ, ವಿಶ್ಲೇಷಣೆಯಾಗಿದೆ,

  ಹೀಗೆ ಅಯುಷ್ಮಂತರಾದ ಸಾರಿಪುತ್ತರು ನುಡಿದರು. ಇದನ್ನು ಅಲಿಸಿ ಆನಂದಿತರಾಗಿದಂತಹ ಭಿಕ್ಕೂಗಳು ಸಾರಿಪುತ್ತರ ಬೊಧನೆಗೆ ಅಭಿನಂದನೆ ಮಾಡಿದರು.

   ಇಲ್ಲಿಗೆ ಹನ್ನೊಂದನೆಯ ಸಚ್ಚವಿಭಂಗ ಸುತ್ತವು ಮುಗಿಯಿತು.






   

 

 










































No comments:

Post a Comment